ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
Cross references
ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.