Home Bibles ಅಂಕೆಗಳ ಪುಸ್ತಕ 11:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 11:20 · ಕನ್ನಡ ಬೈಬಲ್

ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.

Cross references

ನಿರ್ಗಮಕಾಂಡ 16:3

ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.

ನಿರ್ಗಮಕಾಂಡ 16:8

ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.

ನಿರ್ಗಮಕಾಂಡ 16:13

ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.

ಅಂಕೆಗಳ ಪುಸ್ತಕ 11:13

ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.

ಅಂಕೆಗಳ ಪುಸ್ತಕ 14:3

ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?

ಅಂಕೆಗಳ ಪುಸ್ತಕ 14:4

ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.

ಅಂಕೆಗಳ ಪುಸ್ತಕ 16:13

ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?

ಅಂಕೆಗಳ ಪುಸ್ತಕ 20:4

ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?

ಅಂಕೆಗಳ ಪುಸ್ತಕ 21:5

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.

ಯೆಹೋಶುವ 24:27

ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.

1 ಸಮುವೇಲ 2:30

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

1 ಸಮುವೇಲ 10:19

ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.

2 ಸಮುವೇಲ 12:10

ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.

ಕೀರ್ತನೆಗಳು 78:27

ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ

ಕೀರ್ತನೆಗಳು 106:15

ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.

ಸಾಮೇತಿಗಳು 27:7

ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.

ಮಲಾಕಿ 1:6

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

ಅಪೋಸ್ತಲರ ಕೃತ್ಯಗಳು 13:41

ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

1 ತೆಸಲೋನಿಕದವರಿಗೆ 4:8

ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.

Interlinear

Choose Theme