ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
Cross references
ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.