ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.