ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
Cross references
ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.