ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
Cross references
ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.