ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
Cross references
(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.