ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
Cross references
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--