ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.