Home Bibles ಅಂಕೆಗಳ ಪುಸ್ತಕ 15:30 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:30 · ಕನ್ನಡ ಬೈಬಲ್

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

Cross references

ಆದಿಕಾಂಡ 17:14

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

ನಿರ್ಗಮಕಾಂಡ 21:14

ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.

ನಿರ್ಗಮಕಾಂಡ 30:33

ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.

ಲೇವ್ಯಕಾಂಡ 20:3

ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

ಲೇವ್ಯಕಾಂಡ 20:6

ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಲೇವ್ಯಕಾಂಡ 20:10

ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.

ಅಂಕೆಗಳ ಪುಸ್ತಕ 9:13

ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

ಅಂಕೆಗಳ ಪುಸ್ತಕ 14:40

ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.

ದ್ವಿತೀಯೋಪದೇಶಕಾಂಡ 1:43

ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.

ದ್ವಿತೀಯೋಪದೇಶಕಾಂಡ 17:12

ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;

ದ್ವಿತೀಯೋಪದೇಶಕಾಂಡ 29:19

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

1 ಸಮುವೇಲ 3:14

ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.

ಕೀರ್ತನೆಗಳು 19:13

ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

ಕೀರ್ತನೆಗಳು 69:9

ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ಕೀರ್ತನೆಗಳು 74:18

ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.

ಕೀರ್ತನೆಗಳು 74:22

ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.

ಕೀರ್ತನೆಗಳು 79:12

ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.

ಕೀರ್ತನೆಗಳು 89:51

ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್‌, ಅಮೆನ್‌.

ಸಾಮೇತಿಗಳು 14:31

ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.

ಯೆಶಾಯ 37:23

ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?

ಮತ್ತಾಯ 12:32

ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಹೆಬ್ರಿಯರಿಗೆ 10:29

ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

2 ಪೇತ್ರ 2:10

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

Interlinear

Choose Theme