ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
Cross references
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?