Home Bibles ಅಂಕೆಗಳ ಪುಸ್ತಕ 16:22 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:22 · ಕನ್ನಡ ಬೈಬಲ್

ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.

Cross references

ಆದಿಕಾಂಡ 18:23

ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?

ಆದಿಕಾಂಡ 18:25

ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

ಆದಿಕಾಂಡ 18:32

ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.

ಲೇವ್ಯಕಾಂಡ 10:6

ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.

ಅಂಕೆಗಳ ಪುಸ್ತಕ 14:5

ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.

ಅಂಕೆಗಳ ಪುಸ್ತಕ 16:4

ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು

ಅಂಕೆಗಳ ಪುಸ್ತಕ 16:45

ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.

ಅಂಕೆಗಳ ಪುಸ್ತಕ 27:16

ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;

ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಯೆಹೋಶುವ 22:18

ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.

2 ಸಮುವೇಲ 24:1

ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.

2 ಸಮುವೇಲ 24:17

ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.

ಯೋಬ 12:10

ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.

ಕೀರ್ತನೆಗಳು 99:6

ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.

ಸಭಾಪ್ರಸಂಗಿ 12:7

ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

ಯೆಶಾಯ 57:16

ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

ಜೆಕರ್ಯ 12:1

ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--

ರೋಮಾಪುರದವರಿಗೆ 5:18

ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

1 ಕೊರಿಂಥದವರಿಗೆ 13:7

ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.

ಹೆಬ್ರಿಯರಿಗೆ 12:9

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?

Interlinear

Choose Theme