ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
Cross references
ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.