ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.