ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
Cross references
ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.