ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
Cross references
ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.
ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.