ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
Cross references
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.