ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Cross references
ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.