ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
Cross references
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.