Home Bibles ಅಂಕೆಗಳ ಪುಸ್ತಕ 20:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 20:12 · ಕನ್ನಡ ಬೈಬಲ್

ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

Cross references

ಲೇವ್ಯಕಾಂಡ 10:3

ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.

ಅಂಕೆಗಳ ಪುಸ್ತಕ 11:15

ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಅಂಕೆಗಳ ಪುಸ್ತಕ 11:21

ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.

ಅಂಕೆಗಳ ಪುಸ್ತಕ 20:24

ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.

ಅಂಕೆಗಳ ಪುಸ್ತಕ 27:14

ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.

ದ್ವಿತೀಯೋಪದೇಶಕಾಂಡ 1:37

ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.

ದ್ವಿತೀಯೋಪದೇಶಕಾಂಡ 3:23

ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--

ದ್ವಿತೀಯೋಪದೇಶಕಾಂಡ 32:49

ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

ದ್ವಿತೀಯೋಪದೇಶಕಾಂಡ 32:51

ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 34:4

ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.

ಯೆಹೋಶುವ 1:2

ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.

2 ದಿನವೃತ್ತಾಂತ 20:20

ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

ಕೀರ್ತನೆಗಳು 99:8

ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.

ಯೆಶಾಯ 7:9

ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.

ಯೆಶಾಯ 8:13

ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.

ಯೆಹೆಜ್ಕೇಲ 20:41

ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

ಯೆಹೆಜ್ಕೇಲ 36:23

ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 38:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

ಮತ್ತಾಯ 17:17

ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಮತ್ತಾಯ 17:20

ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.

ಲೂಕ 1:20

ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.

ಲೂಕ 1:45

ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.

ಯೋಹಾನ 1:17

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ರೋಮಾಪುರದವರಿಗೆ 4:20

ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.

1 ಪೇತ್ರ 3:15

ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;

Interlinear

Choose Theme