ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
Cross references
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;