ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
Cross references
ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.