ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
Cross references
ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.