ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
Cross references
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ
ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.