ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
Cross references
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು.
ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.