ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
Cross references
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.