Home Bibles ಅಂಕೆಗಳ ಪುಸ್ತಕ 22:5 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 22:5 · ಕನ್ನಡ ಬೈಬಲ್

ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

Cross references

ಆದಿಕಾಂಡ 13:16

ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.

ನಿರ್ಗಮಕಾಂಡ 1:7

ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.

ನಿರ್ಗಮಕಾಂಡ 10:15

ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

ಅಂಕೆಗಳ ಪುಸ್ತಕ 23:7

ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.

ಅಂಕೆಗಳ ಪುಸ್ತಕ 31:8

ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.

ದ್ವಿತೀಯೋಪದೇಶಕಾಂಡ 23:4

ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.

ದ್ವಿತೀಯೋಪದೇಶಕಾಂಡ 23:5

ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.

ಯೆಹೋಶುವ 13:22

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.

ಯೆಹೋಶುವ 24:9

ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.

ನೆಹೆಮ್ಯ 13:1

ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

ನೆಹೆಮ್ಯ 13:2

ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್‌ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.

ಕೀರ್ತನೆಗಳು 105:24

ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.

ಮೀಕ 6:5

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.

2 ಪೇತ್ರ 2:15

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

ಪ್ರಕಟನೆ 2:14

ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

Interlinear

Choose Theme