ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
Cross references
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು