ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!