ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
Cross references
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.