ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.