Home Bibles ಅಂಕೆಗಳ ಪುಸ್ತಕ 23:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 23:9 · ಕನ್ನಡ ಬೈಬಲ್

ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

Cross references

ನಿರ್ಗಮಕಾಂಡ 19:5

ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

ನಿರ್ಗಮಕಾಂಡ 33:16

ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

ದ್ವಿತೀಯೋಪದೇಶಕಾಂಡ 32:8

ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.

ದ್ವಿತೀಯೋಪದೇಶಕಾಂಡ 33:28

ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

ಎಜ್ರಾ 9:2

ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.

ಎಸ್ತೇರ್ 3:8

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಆಮೋಸ 9:9

ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

ಮೀಕ 7:14

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

2 ಕೊರಿಂಥದವರಿಗೆ 6:17

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಎಫೆಸದವರಿಗೆ 2:12

ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

Interlinear

Choose Theme