ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
Cross references
ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--