ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
Cross references
ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.