Home Bibles ಅಂಕೆಗಳ ಪುಸ್ತಕ 25:4 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 25:4 · ಕನ್ನಡ ಬೈಬಲ್

ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.

Cross references

ನಿರ್ಗಮಕಾಂಡ 18:25

ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಅಂಕೆಗಳ ಪುಸ್ತಕ 25:11

ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.

ಅಂಕೆಗಳ ಪುಸ್ತಕ 25:14

ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.

ಅಂಕೆಗಳ ಪುಸ್ತಕ 25:18

ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 4:3

ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

ದ್ವಿತೀಯೋಪದೇಶಕಾಂಡ 13:6

ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು

ದ್ವಿತೀಯೋಪದೇಶಕಾಂಡ 13:7

ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ

ದ್ವಿತೀಯೋಪದೇಶಕಾಂಡ 13:11

ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.

ದ್ವಿತೀಯೋಪದೇಶಕಾಂಡ 13:13

ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ

ದ್ವಿತೀಯೋಪದೇಶಕಾಂಡ 13:15

ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.

ದ್ವಿತೀಯೋಪದೇಶಕಾಂಡ 13:17

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.

ದ್ವಿತೀಯೋಪದೇಶಕಾಂಡ 21:22

ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ದ್ವಿತೀಯೋಪದೇಶಕಾಂಡ 21:23

ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಯೆಹೋಶುವ 7:25

ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

ಯೆಹೋಶುವ 22:17

ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.

ಯೆಹೋಶುವ 23:2

ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.

2 ಸಮುವೇಲ 21:6

ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

2 ಸಮುವೇಲ 21:9

ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

ಎಸ್ತೇರ್ 7:9

ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಕೀರ್ತನೆಗಳು 85:3

ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.

ಯೋನ 3:9

ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

Interlinear

Choose Theme