ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
Cross references
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.