ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.