ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
ಇವನ ಮಗನು ನೋನನು, ಇವನ ಮಗನು ಯೆಹೋಷುವನು.
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.