ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
Cross references
ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;