ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
Cross references
ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.