ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
Cross references
ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.