ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
Cross references
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ