ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
Cross references
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.