ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
Cross references
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.