ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
Cross references
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.