ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
Cross references
ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.
ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ