Home Bibles ಅಂಕೆಗಳ ಪುಸ್ತಕ 4:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:15 · ಕನ್ನಡ ಬೈಬಲ್

ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.

Cross references

ನಿರ್ಗಮಕಾಂಡ 19:12

ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.

ನಿರ್ಗಮಕಾಂಡ 19:21

ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.

ಅಂಕೆಗಳ ಪುಸ್ತಕ 1:51

ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಂಕೆಗಳ ಪುಸ್ತಕ 3:30

ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.

ಅಂಕೆಗಳ ಪುಸ್ತಕ 3:31

ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.

ಅಂಕೆಗಳ ಪುಸ್ತಕ 3:38

ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಂಕೆಗಳ ಪುಸ್ತಕ 7:9

ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.

ಅಂಕೆಗಳ ಪುಸ್ತಕ 10:21

ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.

ಅಂಕೆಗಳ ಪುಸ್ತಕ 18:3

ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.

ದ್ವಿತೀಯೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಯೆಹೋಶುವ 4:10

ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.

1 ಸಮುವೇಲ 6:19

ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.

2 ಸಮುವೇಲ 6:6

ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

2 ಸಮುವೇಲ 6:13

ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

2 ಸಮುವೇಲ 15:24

ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.

1 ಅರಸುಗಳು 8:3

ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.

1 ದಿನವೃತ್ತಾಂತ 13:9

ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.

1 ದಿನವೃತ್ತಾಂತ 15:2

ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

1 ದಿನವೃತ್ತಾಂತ 15:15

ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.

ಹೆಬ್ರಿಯರಿಗೆ 12:18

ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ

Interlinear

Choose Theme