ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
Cross references
ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.