ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
Cross references
ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.