ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
Cross references
ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.